Category Archives: ನೀತಿಕತೆ

ವ್ಯಕ್ತಿತ್ವ ವಿಕಸನ: ಹೆಂಡತಿಗೆ ಕಿವಿ ಕೇಳಿಸುತ್ತಿಲ್ಲ

By | 18/06/2019

ಒಂದು ಕತೆಯಿಂದ ಆರಂಭಿಸೋಣ. ಒಂದೂರಲ್ಲಿ ಗಂಡ-ಹೆಂಡತಿ ಅನ್ಯೋನ್ಯವಾಗಿದ್ದರು. ಇಬ್ಬರೂ ಮಧ್ಯವಯಸ್ಕರು. ಇತ್ತೀಚೆಗೆ ಗಂಡನಿಗೆ ‘ನನ್ನ ಹೆಂಡತಿಗೆ ಕಿವಿ ಸರಿಯಾಗಿ ಕೇಳಿಸುತ್ತಿಲ್ಲ’ ಎಂಬ ಸಂಶಯ ಆರಂಭವಾಯಿತು. ಆಕೆಯ ಕಿವಿಗೆ ಚಿಕಿತ್ಸೆ ನೀಡಬೇಕೆಂದುಕೊಂಡನು. ಆದರೆ, ಇದನ್ನು ಹೆಂಡತಿಗೆ ಹೇಳುವುದು ಹೇಗೆ ಎಂಬ ಸಂದಿಗ್ಧತೆಗೆ ಬಿದ್ದನು. ತನ್ನ ಫ್ಯಾಮಿಲಿ ಡಾಕ್ಟರ್‌ಗೆ ಈ ಕುರಿತು ತಿಳಿಸಿದ. ಆಕೆಗೆ ಕಿವಿ ಕೇಳಿಸುತ್ತದೆಯೇ? ಇಲ್ಲವೇ? ಎಂದು ತಿಳಿಯಲು ಡಾಕ್ಟರ್ ಒಂದು ಐಡಿಯಾ ಹೇಳಿದರು. ‘ನಿನ್ನ ಹೆಂಡತಿಗೆ ಕಿವಿ ಕೇಳಿಸುತ್ತದೆಯೇ ಇಲ್ಲವೇ ಎಂದು ತಿಳಿಯಲು ಮೊದಲು ನೀನು ಅವಳಿಂದ ಹತ್ತು ಅಡಿ… Read More »

ನೀತಿಕತೆ: Torchlight ಆನ್ ಮಾಡಲು ನಿಮಗೆ ಗೊತ್ತೆ?

By | 17/06/2019

ಹೆಡ್‍ಲೈನ್ ನೋಡಿದಾಗ ನಿಮಗೆ ಆಶ್ಚರ್ಯವಾಗಿರಬಹುದು. ಟಾರ್ಚ್ ಯಾಕೆ? ದೊಡ್ಡ ಜನರೇಟರ್‍ ಅನ್ನೇ ಆನ್ ಮಾಡ್ತಿವಿ, ಎಂದು ಹೇಳಬಹುದು. ನಾನು ಹೇಳಲು ಹೊರಟ ಟಾರ್ಚ್ ಒಂದಿಷ್ಟು ವಿಚಾರ ಮಾಡುವಂತದ್ದು. ನೀತಿಕತೆ. ಯಂಡಮೂರಿ ವೀರೇಂದ್ರನಾಥ್ ಬರೆದ ಕಣಿವೆಯಿಂದ ಶಿಖರಕ್ಕೆ (ಕನ್ನಡ ಅನುವಾದ- ಯತಿರಾಜ್ ವೀರಾಂಬುಧಿ) ಪುಸ್ತಕ ಓದಿದಾಗ ಒಂದು ಕತೆ ಗಮನ ಸೆಳೆಯಿತು. ಅದನ್ನು ಕರ್ನಾಟಕಬೆಸ್ಟ್.ಕಾಂ ಓದುಗರೊಂದಿಗೆ ಹಂಚಿಕೊಳ್ಳಬೇಕೆನಿಸಿತು. [rml_read_more] “ತನ್ನ ಸ್ನೇಹಿತನನ್ನು ಒಬ್ಬ ಡಿನ್ನರ್‍ಗೆ ಆಹ್ವಾನಿಸಿದ. ಆತ ಮನೆಗೆ ಮರಳಿ ಹೊರಟಾಗ ಅವನಿಗೆ ಟಾರ್ಚ್‍ಲೈಟ್ ಒಂದನ್ನು ನೀಡಿದನಂತೆ. “ಇದೇಕೆ, ನನಗೆ ರಾತ್ರಿ ವೇಳೆ… Read More »

Inspiration: ಸ್ಫೂರ್ತಿದಾಯಕ ಬದುಕಿಗೆ ಹತ್ತು ನೀತಿಕತೆಗಳು

By | 04/01/2019

ನಮ್ಮ ಬದುಕು ಯಾವುದೋ ದಿಕ್ಕಿನಲ್ಲಿ ಸಾಗುತ್ತಿರುತ್ತದೆ. ಅದನ್ನು ಸರಿಯಾದ ದಿಕ್ಕಿನತ್ತ ತಿರುಗಿಸಲು ನಾವು ಆಲೋಚನೆ ಮಾಡಬೇಕು. ಕೆಲವೊಮ್ಮೆ ಯಾರಾದರೂ ನಮಗೆ ದಿಕ್ಕು ತೋರಿಸಬಹುದು. ಯಾರೋ ಹೇಳಿದ ಮಾತುಗಳು ನಮಗೆ ಸ್ಫೂರ್ತಿ ತರಬಹುದು. ಇನ್ನು ಕೆಲವೊಮ್ಮೆ ಯಾರಾದರೂ ಹೇಳಿದ ಕತೆ ನಮಗೆ ಹೊಸ ದಿಕ್ಕು ತೋರಿಸಬಹುದು. ಸ್ಫೂರ್ತಿದಾಯಕ ಕತೆಗಳು ತುಂಬಾ ಪವರ್ ಫುಲ್. ಒಂದು ಪುಟ್ಟ ಕತೆಯ ಹಿಂದೆ ದೊಡ್ಡ ಪಾಠ ಇರುತ್ತದೆ. ಇಂಟರ್ನೆಟ್ ನಲ್ಲಿ ಇಂತಹ ಸಾಕಷ್ಟು ಸ್ಫೂರ್ತಿದಾಯಕ ಕತೆಗಳಿವೆ. ಅವುಗಳಲ್ಲಿ ನನಗೆ ಆಲ್ ಟೈಂ ಫೇವರಿಟ್ ಆದ ಹತ್ತು ಕತೆಗಳನ್ನು… Read More »

Moral Story: ಡೇವಿಡ್ ಮತ್ತು ಗೋಲಿಯಾಥ್ (ಸಂಗ್ರಹ)

By | 03/12/2018

ಶಿವ್ ಖೇರಾ ಬರೆದ “ಯು ಕ್ಯಾನ್ ವಿನ್’ ಪುಸ್ತಕದಲ್ಲಿ ಓದಿದ ಕತೆಯಿದು. ಈ ಕತೆಯನ್ನು ಈ ಹಿಂದೆ ಬೇರೆಲ್ಲೋ ಓದಿದ್ದೆ. ಯಾವ ಕ್ಲಾಸ್ ಪಠ್ಯ ಪುಸ್ತಕದಲ್ಲಿ ಎನ್ನುವುದು ನೆನಪಿಲ್ಲ. ಈ ಪುಟ್ಟ ಕತೆಯು ದೊಡ್ಡದಾದ ವ್ಯಕ್ತಿತ್ವ ವಿಕಸನ ಪಾಠ ಹೊಂದಿದೆ. ನಿಮ್ಮೊಂದಿಗೆ ಹಂಚಿಕೊಳ್ಳಬೇಕೆನಿಸಿತು. ಡೇವಿಡ್ ಮತ್ತು ಗೋಲಿಯಾಥ್ ಒಂದು ಊರಿನಲ್ಲಿ ದೈತ್ಯನಿದ್ದ. ದೈತ್ಯನೆಂದರೆ ತುಂಬಾ ಬೃಹತ್ ಗಾತ್ರದ ಶಕ್ತಿಶಾಲಿ ವ್ಯಕ್ತಿ. ಆತ ಎಲ್ಲರಿಗೂ ಕಿರುಕುಳ ಕೊಡುತ್ತಿದ್ದ. ಆ ಊರಿನವರು ಆತ ಕೊಡುವ ಹಿಂಸೆಯಿಂದ ತತ್ತರಿಸಿದ್ದರು. ಆತನಿಗೆ ಭಯಪಟ್ಟು ಬದುಕುತ್ತಿದ್ದರು. ಒಂದು ದಿನ… Read More »

Moral Story: ವಜ್ರ ಮತ್ತು ರೈತ

By | 01/12/2018

ಈ ಸ್ಫೂರ್ತಿದಾಯಕ ಕತೆಯ ತುಣುಕು ಇಂಟರ್ನೆಟ್ ನಲ್ಲಿ ದೊರಕಿತು. ಅದನ್ನು ಒಂದಿಷ್ಟು ವಿಸ್ತರಿಸಿ, ಹೊಸತನದಿಂದ ಇಲ್ಲಿ ಮರುರಚನೆ ಮಾಡಲಾಗಿದೆ. ಈ ಕತೆಯ ಹೆಸರು ವಜ್ರ ಮತ್ತು ರೈತ ಎಂದಿರಲಿ ಒಂದೂರಲ್ಲಿ ಒಬ್ಬ ರೈತನಿದ್ದ. ಆತ ಸಂತೃಪ್ತ. ಆತ ಸದಾ ನಗುನಗುತ್ತ ಕೆಲಸ ಮಾಡುತ್ತಿದ್ದ. ಹೊಲದಲ್ಲಿ ಕಷ್ಟಪಟ್ಟು ದುಡಿದರೂ ಆತ ದುಃಖಿತನಾಗಿರಲಿಲ್ಲ. ಒಂದು ದಿನ ವಿವೇಕಿಯೊಬ್ಬ ರೈತನಲ್ಲಿಗೆ ಬಂದ. ಆತ ಬಂದು ಜೋಳದ ರೊಟ್ಟಿ ತಿಂದು ಸಂತೃಪ್ತನಾದ. ಆತನು ಈ ರೈತನ ಗುಡಿಸಲು, ಅಲ್ಲಿನ ಬಡತನ ಗಮನಿಸಿದ. ಏನೋ ಮಾತನಾಡುತ್ತ ವಜ್ರದ ಕುರಿತು… Read More »

Moral Story: ಪರೀಕ್ಷೆ ತಪ್ಪಿಸಿದ ಹುಡುಗರು

By | 18/11/2018

ನಾಲ್ವರು ಕಾಲೇಜು ಹುಡುಗರಿದ್ದರು. ಅವರಿಗೆ ಮರುದಿನ ಪರೀಕ್ಷೆ ಇತ್ತು. ಆದರೆ, ಹಿಂದಿನ ದಿನ ಸ್ನೇಹಿತನ ಹುಟ್ಟುಹಬ್ಬವೆಂದು ಮಧ್ಯರಾತ್ರಿಯವರೆಗೆ ಪಾರ್ಟಿ ಮಾಡಿದರು. ಮರುದಿನ ಪರೀಕ್ಷೆಯ ವಿಷಯವೇ ಅವರಿಗೆ ಮರೆತು ಹೋಗಿತ್ತು. ಅವರು ಏನೂ ಅಧ್ಯಯನ ಮಾಡಿರಲಿಲ್ಲ. ಮರುದಿನ ಪರೀಕ್ಷೆ. ಈ ಪರೀಕ್ಷೆ ತಪ್ಪಿಸಲು ಏನಾದರೂ ಐಡಿಯಾ ಮಾಡಬೇಕು ಎಂದುಕೊಂಡರು. ನಾವು ನಿನ್ನೆ ರಾತ್ರಿ ಒಂದು ಮದುವೆಗೆ ಹೋಗಿದಾಗ ಒಂದು ಘಟನೆ ನಡೆಯಿತು.  ಬರುವಾಗ ಕಾರಿನ ಒಂದು ಟೈರ್ ಸ್ಪೋಟಗೊಂಡು ರಸ್ತೆಯಲ್ಲಿಯೇ ರಾತ್ರಿಯಿಡಿ ಕಳೆಯಬೇಕಾಯಿತು ಎಂಬ ಸುಳ್ಳನ್ನು ಪ್ರಾಂಶುಪಾಲರ ಬಳಿ ಹೇಳಿದರು. ಇವರ ಮಾತುಗಳನ್ನು… Read More »