Tag Archives: ನೀತಿಕತೆ

ನೀತಿಕತೆ: Torchlight ಆನ್ ಮಾಡಲು ನಿಮಗೆ ಗೊತ್ತೆ?

By | 17/06/2019

ಹೆಡ್‍ಲೈನ್ ನೋಡಿದಾಗ ನಿಮಗೆ ಆಶ್ಚರ್ಯವಾಗಿರಬಹುದು. ಟಾರ್ಚ್ ಯಾಕೆ? ದೊಡ್ಡ ಜನರೇಟರ್‍ ಅನ್ನೇ ಆನ್ ಮಾಡ್ತಿವಿ, ಎಂದು ಹೇಳಬಹುದು. ನಾನು ಹೇಳಲು ಹೊರಟ ಟಾರ್ಚ್ ಒಂದಿಷ್ಟು ವಿಚಾರ ಮಾಡುವಂತದ್ದು. ನೀತಿಕತೆ. ಯಂಡಮೂರಿ ವೀರೇಂದ್ರನಾಥ್ ಬರೆದ ಕಣಿವೆಯಿಂದ ಶಿಖರಕ್ಕೆ (ಕನ್ನಡ ಅನುವಾದ- ಯತಿರಾಜ್ ವೀರಾಂಬುಧಿ) ಪುಸ್ತಕ ಓದಿದಾಗ ಒಂದು ಕತೆ ಗಮನ ಸೆಳೆಯಿತು. ಅದನ್ನು ಕರ್ನಾಟಕಬೆಸ್ಟ್.ಕಾಂ ಓದುಗರೊಂದಿಗೆ ಹಂಚಿಕೊಳ್ಳಬೇಕೆನಿಸಿತು. [rml_read_more] “ತನ್ನ ಸ್ನೇಹಿತನನ್ನು ಒಬ್ಬ ಡಿನ್ನರ್‍ಗೆ ಆಹ್ವಾನಿಸಿದ. ಆತ ಮನೆಗೆ ಮರಳಿ ಹೊರಟಾಗ ಅವನಿಗೆ ಟಾರ್ಚ್‍ಲೈಟ್ ಒಂದನ್ನು ನೀಡಿದನಂತೆ. “ಇದೇಕೆ, ನನಗೆ ರಾತ್ರಿ ವೇಳೆ… Read More »

Inspiration: ಸ್ಫೂರ್ತಿದಾಯಕ ಬದುಕಿಗೆ ಹತ್ತು ನೀತಿಕತೆಗಳು

By | 04/01/2019

ನಮ್ಮ ಬದುಕು ಯಾವುದೋ ದಿಕ್ಕಿನಲ್ಲಿ ಸಾಗುತ್ತಿರುತ್ತದೆ. ಅದನ್ನು ಸರಿಯಾದ ದಿಕ್ಕಿನತ್ತ ತಿರುಗಿಸಲು ನಾವು ಆಲೋಚನೆ ಮಾಡಬೇಕು. ಕೆಲವೊಮ್ಮೆ ಯಾರಾದರೂ ನಮಗೆ ದಿಕ್ಕು ತೋರಿಸಬಹುದು. ಯಾರೋ ಹೇಳಿದ ಮಾತುಗಳು ನಮಗೆ ಸ್ಫೂರ್ತಿ ತರಬಹುದು. ಇನ್ನು ಕೆಲವೊಮ್ಮೆ ಯಾರಾದರೂ ಹೇಳಿದ ಕತೆ ನಮಗೆ ಹೊಸ ದಿಕ್ಕು ತೋರಿಸಬಹುದು. ಸ್ಫೂರ್ತಿದಾಯಕ ಕತೆಗಳು ತುಂಬಾ ಪವರ್ ಫುಲ್. ಒಂದು ಪುಟ್ಟ ಕತೆಯ ಹಿಂದೆ ದೊಡ್ಡ ಪಾಠ ಇರುತ್ತದೆ. ಇಂಟರ್ನೆಟ್ ನಲ್ಲಿ ಇಂತಹ ಸಾಕಷ್ಟು ಸ್ಫೂರ್ತಿದಾಯಕ ಕತೆಗಳಿವೆ. ಅವುಗಳಲ್ಲಿ ನನಗೆ ಆಲ್ ಟೈಂ ಫೇವರಿಟ್ ಆದ ಹತ್ತು ಕತೆಗಳನ್ನು… Read More »

Moral Story: ಡೇವಿಡ್ ಮತ್ತು ಗೋಲಿಯಾಥ್ (ಸಂಗ್ರಹ)

By | 03/12/2018

ಶಿವ್ ಖೇರಾ ಬರೆದ “ಯು ಕ್ಯಾನ್ ವಿನ್’ ಪುಸ್ತಕದಲ್ಲಿ ಓದಿದ ಕತೆಯಿದು. ಈ ಕತೆಯನ್ನು ಈ ಹಿಂದೆ ಬೇರೆಲ್ಲೋ ಓದಿದ್ದೆ. ಯಾವ ಕ್ಲಾಸ್ ಪಠ್ಯ ಪುಸ್ತಕದಲ್ಲಿ ಎನ್ನುವುದು ನೆನಪಿಲ್ಲ. ಈ ಪುಟ್ಟ ಕತೆಯು ದೊಡ್ಡದಾದ ವ್ಯಕ್ತಿತ್ವ ವಿಕಸನ ಪಾಠ ಹೊಂದಿದೆ. ನಿಮ್ಮೊಂದಿಗೆ ಹಂಚಿಕೊಳ್ಳಬೇಕೆನಿಸಿತು. ಡೇವಿಡ್ ಮತ್ತು ಗೋಲಿಯಾಥ್ ಒಂದು ಊರಿನಲ್ಲಿ ದೈತ್ಯನಿದ್ದ. ದೈತ್ಯನೆಂದರೆ ತುಂಬಾ ಬೃಹತ್ ಗಾತ್ರದ ಶಕ್ತಿಶಾಲಿ ವ್ಯಕ್ತಿ. ಆತ ಎಲ್ಲರಿಗೂ ಕಿರುಕುಳ ಕೊಡುತ್ತಿದ್ದ. ಆ ಊರಿನವರು ಆತ ಕೊಡುವ ಹಿಂಸೆಯಿಂದ ತತ್ತರಿಸಿದ್ದರು. ಆತನಿಗೆ ಭಯಪಟ್ಟು ಬದುಕುತ್ತಿದ್ದರು. ಒಂದು ದಿನ… Read More »

Moral Story: ವಜ್ರ ಮತ್ತು ರೈತ

By | 01/12/2018

ಈ ಸ್ಫೂರ್ತಿದಾಯಕ ಕತೆಯ ತುಣುಕು ಇಂಟರ್ನೆಟ್ ನಲ್ಲಿ ದೊರಕಿತು. ಅದನ್ನು ಒಂದಿಷ್ಟು ವಿಸ್ತರಿಸಿ, ಹೊಸತನದಿಂದ ಇಲ್ಲಿ ಮರುರಚನೆ ಮಾಡಲಾಗಿದೆ. ಈ ಕತೆಯ ಹೆಸರು ವಜ್ರ ಮತ್ತು ರೈತ ಎಂದಿರಲಿ ಒಂದೂರಲ್ಲಿ ಒಬ್ಬ ರೈತನಿದ್ದ. ಆತ ಸಂತೃಪ್ತ. ಆತ ಸದಾ ನಗುನಗುತ್ತ ಕೆಲಸ ಮಾಡುತ್ತಿದ್ದ. ಹೊಲದಲ್ಲಿ ಕಷ್ಟಪಟ್ಟು ದುಡಿದರೂ ಆತ ದುಃಖಿತನಾಗಿರಲಿಲ್ಲ. ಒಂದು ದಿನ ವಿವೇಕಿಯೊಬ್ಬ ರೈತನಲ್ಲಿಗೆ ಬಂದ. ಆತ ಬಂದು ಜೋಳದ ರೊಟ್ಟಿ ತಿಂದು ಸಂತೃಪ್ತನಾದ. ಆತನು ಈ ರೈತನ ಗುಡಿಸಲು, ಅಲ್ಲಿನ ಬಡತನ ಗಮನಿಸಿದ. ಏನೋ ಮಾತನಾಡುತ್ತ ವಜ್ರದ ಕುರಿತು… Read More »

ನೀತಿಕತೆ: ಬಾವಿಗೆ ಬಿದ್ದ ಕತ್ತೆ, ಎದ್ದುಬಂದ ಕತೆ

By | 22/10/2018

ಒಬ್ಬ ವ್ಯಕ್ತಿಯು ಕತ್ತೆಯೊಂದನ್ನು ಸಾಕಿದ್ದ. ಅದು ಅವನ ಪ್ರೀತಿಯ ಕತ್ತೆಯಾಗಿತ್ತು. ಒಂದು ದಿನ ದಾರಿಯಲ್ಲಿ ಬರುತ್ತಿರುವಾಗ ಆ ಕತ್ತೆ ಪುಟ್ಟ ಬಾವಿಯೊಂದಕ್ಕೆ ಬಿದ್ದುಬಿಟ್ಟಿತು. ಎಷ್ಟೇ ಕಷ್ಟಪಟ್ಟರೂ ಆ ಕತ್ತೆಯನ್ನು ಅಲ್ಲಿಂದ ಹೊರತೆಗೆಯುವ ದಾರಿ ಅವನಿಗೆ ಹೊಳೆಯಲಿಲ್ಲ. ಸುತ್ತಲೂ ಜನರು ಗುಂಪುಗೂಡಿದ್ದರು. ಇದನ್ನು ಇಲ್ಲೇ ಬಿಟ್ಟು ಹೋದರೆ ಪಾಪ ತುಂಬಾ ಕಷ್ಟಪಡುತ್ತದೆ. ಅದಕ್ಕಾಗಿ ಈ ಪುಟ್ಟ ಬಾವಿಗೆ ಮಣ್ಣು ತುಂಬಿ ಅದನ್ನು ಕೊಂದು ಬಿಡಿ ಎಂಬ ಅಭಿಪ್ರಾಯ ಬಂತು. ತನ್ನ ಪ್ರೀತಿಯ ಕತ್ತೆಯನ್ನು ಸಾಯಿಸಲು ಅವನಿಗೆ ಮನಸ್ಸು ಬರಲಿಲ್ಲ. ಆದರೆ, ಬಾವಿಯೊಳಗೆ ನರಳಿ… Read More »

ನೀತಿಕತೆ: ಎಲ್ಲರ ಬದುಕಿನಲ್ಲಿಯೂ ಒಂದು ಕತೆ ಇರುತ್ತದೆ

By | 22/10/2018

ಇಪ್ಪತ್ನಾಲ್ಕು ವರ್ಷ ವಯಸ್ಸಿನ ತರುಣ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಕಿಟಕಿಯಾಚೆ ನೋಡಿ ಆ ಯುವಕ `ಅಪ್ಪ, ನೋಡಲ್ಲಿ, ಮರಗಳು ಹಿಂದೆ ಓಡುತ್ತಿವೆ’ ಎಂದ. ತಂದೆ ನಕ್ಕರು. ಆ ತರುಣನ ಎದುರು ಕುಳಿತ ನವದಂಪತಿಗಳಿಗೆ ಇದು ಅಸಹನೀಯ ಅನಿಸಿತು. ಇಷ್ಟು ದೊಡ್ಡ ಯುವಕ ಪುಟ್ಟ ಮಕ್ಕಳಂತೆ ಇದ್ದಾನಲ್ಲ ಎಂದೆನಿಸಿತು.  ಸ್ವಲ್ಪ ಹೊತ್ತಿನಲ್ಲಿ ಆ ತರುಣ `ಅಪ್ಪ, ಮೋಡಗಳೂ ನಮ್ಮೊಂದಿಗೆ ಸಾಗುತ್ತಿವೆ’ ಎಂದ. ಈಗ ನವದಂಪತಿಗಳಿಗೆ ತಡೆಯಲಾಗಲಿಲ್ಲ. ಆ ಯುವಕನ ತಂದೆಗೆ `ಇವನನ್ನು ಒಳ್ಳೆಯ ವೈದ್ಯರಿಗೆ ಯಾಕೆ ತೋರಿಸಬಾರದು?’ ಎಂದರು.  ಅದಕ್ಕೆ ಹಿರಿಯ ವ್ಯಕ್ತಿ ನಕ್ಕು… Read More »