Tag Archives: education

ಸಿಬಿಎಸ್ ಇ 12 ನೇ ತರಗತಿ ಫಲಿತಾಂಶ: ಈ ಬಾರಿಯೂ ಬಾಲಕಿಯರೇ ಮೇಲುಗೈ

By | 31/07/2021

ಸಿಬಿಎಸ್ ಇ( ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12 ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಕೊರೊನಾ ಕಾರಣದಿಂದ ಪರೀಕ್ಷೆ ನಡೆದಿರಲಿಲ್ಲ. 30:30:40 ಅನುಪಾತದ ಅನುಸಾರದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. 10 ನೇ ಮತ್ತು 11 ನೇ ತರಗತಿ ಅಂತಿಮ ಪರೀಕ್ಷೆ ಹಾಗೂ 12 ನೇ ತರಗತಿಯಲ್ಲಿ ನಡೆಸಿದ ಪೂರ್ವ ಸಿದ್ಧತಾ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಪೈಕಿ ಶೇ.99.37 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು… Read More »

ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಆಯ್ಕೆಯಾದ ಮಕ್ಕಳನ್ನು ಆ.3 ರೊಳಗೆ ದಾಖಲಿಸಲು ಶಿಕ್ಷಣ ಇಲಾಖೆ ಸೂಚನೆ

By | 27/07/2021

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆಯ್ಕೆಯಾದ ಮಕ್ಕಳನ್ನು ಆ‌.3 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ದಾಖಲು ಪಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕೋರಿದೆ. ಖಾಸಗಿ ಅನುದಾನಿತ ಹಾಗೂ ಅನುದಾ‌ನರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ 6776 ಅರ್ಜಿ ಪರಿಗಣಿಸಿ ಜು.22 ರಂದು ಎರಡನೇ ಸುತ್ತಿನ ಲಾಟರಿಯನ್ನು‌ ಆನ್ಲೈನ್ ಮೂಲಕ ನಡೆಸಲಾಗಿದೆ. ಈ ಪ್ರಕ್ರಿಯೆಯಲ್ಲಿ 764 ಮಂದಿ ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಸೀಟು ಹಂಚಿಕೆಯ ಮಾಹಿತಿಯನ್ನು ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆ ಗೆ ಕಳುಹಿಸಲಾಗಿದೆ.

ICSE ಮತ್ತು ISE ಫಲಿತಾಂಶ ನಾಳೆ ಪ್ರಕಟ

By | 23/07/2021

ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ತಮ್ಮ ಪ್ರಕಟಣೆಯಲ್ಲಿ ಐಸಿಎಸ್ ಇ ( ಹತ್ತನೇ ತರಗತಿ) ಮತ್ತು ಐಎಸ್ ಸಿ ( 12 ನೇ ತರಗತಿ) ಪರೀಕ್ಷೆಯ ಫಲಿತಾಂಶವು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ತಿಳಿಸಿದೆ. ಕೊರೊನಾ ಕಾರಣದಿಂದ ಐಸಿಎಸ್ ಇ ಮತ್ತು ಐಎಸ್ಸಿ ವಿದ್ಯಾರ್ಥಿಗಳಿ ತಮ್ಮ ಉತ್ತರ ಪತ್ರಿಕೆ ಮರು ಮೌಲ್ಯ ಮಾಪನಕ್ಕೆ ಅರ್ಜಿ‌ ಸಲ್ಲಿಸಲು ಈ ಬಾರಿ ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶದ ಕುರಿತು ಆಕ್ಷೇಪಣೆ ಇದ್ದರೆ ಯಾವ ಕಾರಣಕ್ಕಾಗಿ ಮರು ಮೌಲ್ಯಮಾಪನ ನಡೆಸಬೇಕು… Read More »

ಪ್ರಾಧ್ಯಾಪಕರ ವರ್ಗಾವಣೆಯ ತಾತ್ಕಾಲಿಕ ಪಟ್ಟಿ ಬಿಡುಗಡೆ

By | 22/07/2021

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕ ವರ್ಗದ ವರ್ಗಾವಣೆಗೆ ಅರ್ಹ ಪ್ರಾಧ್ಯಾಪಕರ‌ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಕಾರಿ ಇಂಜಿನಿಯರಿಂಗ್, ಪದವಿ ಕಾಲೇಜುಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಬೋಧಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು, ಸರಕಾರಿ‌ ಪಾಲಿಟೆಕ್ನಿಕ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಉಪನ್ಯಾಸಕರ ಉಳಿದ ಮೂಲ ವೃಂದದ ವಲಯವಾರು ಪಟ್ಟಿ, ವಿಶೇಷ ಪ್ರಕರಣಗಳಡಿ ವರ್ಗಾವಣೆಯ ಕಾಯ್ದಿರಿಸಿದ ಬೋಧಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ವರ್ಗಾವಣಾ ತಾತ್ಕಾಲಿಕ ಆದ್ಯತಾ ಪಟ್ಟಿಯಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ, ಜು.23 ರೊಳಗೆ… Read More »

ಬಡ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

By | 22/07/2021

‘ ಕೃಷಿಕ್ ಸರ್ವೋದಯ‌ ಫೌಂಡೇಶನ್ ‘ ಸಂಸ್ಥೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಪಿಯುಸಿ, ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಲಿರುವ ಗ್ರಾಮೀಣ ಬಡ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ‌ಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡ ಅಭ್ಯರ್ಥಿಗಳು ಆದಾಯ, ಆಸ್ತಿ ಸೇರಿ ಕೆಲವು ದೃಢೀಕರಣ ಪತ್ರ ಹಾಗೂ ದಾಖಲೆಗಳ ಸಹಿತ ಅರ್ಜಿಯನ್ನು ಆ.20 ರೊಳಗೆ ನಂ.15, 2 ನೇ ಹಂತ, ಗಾಲ್ಫ್‌ ಅವೆನ್ಯೂ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು ‌- 560008… Read More »

ದ್ವಿತೀಯ ಪಿಯುಸಿ ರಿಸಲ್ಟ್ ಜುಲೈ 20 ಕ್ಕೆ

By | 17/07/2021

ಪಿ.ಯು.ಬೋರ್ಡ್ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಜು.20 ರಂದು ( ಮಂಗಳವಾರ) ಪ್ರಕಟಿಸಲಿದೆ. ಕೋವಿಡ್ ಸೋಂಕು ಪ್ರಕರಣದಿಂದಾಗಿ 2020-21 ನೇ ಸಾಲಿನ ದ್ವಿತೀಯ ಪರೀಕ್ಷೆ ರದ್ದು ಗೊಳಿಸಿರುವ ಇಲಾಖೆ , ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕ ಹಾಗೂ ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶ ಪ್ರಕಟಿಸಲಿದೆ. 2020-21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸುವ ಸಲುವಾಗಿ ಇಲಾಖೆಯು… Read More »