Category Archives: ರಾಜ್ಯ

ಕರ್ನಾಟಕ ಹೈಕೋರ್ಟ್ ನಲ್ಲಿ 150 ಟೈಪಿಸ್ಟ್ ಹುದ್ದೆ : ಡಿಗ್ರಿ ಪಾಸಾದವರಿಗೆ ಅವಕಾಶ, ಉತ್ತಮ ಸಂಬಳ

By | 28/10/2021

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-11-2021 ವೇತನ : ₹ 25,500 – ₹ 81,100 ಹುದ್ದೆಯ ಹೆಸರು : ಬೆರಳಚ್ಚುಗಾರ ಹುದ್ದೆ ಸಂಖ್ಯೆ : 150 ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ಮಾಡಿರಬೇಕು. ( ವಿಜ್ಞಾನ/… Read More »

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ವಿವಿಧ 29 ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

By | 25/10/2021

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು, ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು ಒಟ್ಟು ಹುದ್ದೆ : 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಈ ಜಾಹೀರಾತು ಪ್ರಕಟಗೊಂಡ ದಿನಾಂಕದಿಂದ 30 ದಿವಸದೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ವಿವಿಧ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 25/10/2021

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್ ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ… Read More »

ಚಿತ್ರದುರ್ಗ ಗ್ರಂಥಾಲಯದಲ್ಲಿ ಹುದ್ದೆ

By | 21/10/2021

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರಿಬರಹಟ್ಟಿ ಗ್ರಾಮ‌ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ರೂ.12,000/- ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಕೆಳಕಾಣಿಸಿದ ಷರತ್ತುಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ 10-11-2021 ರೊಳಗೆ ಪಿಡಿಒ / ಪಂಚಾಯ್ತಿ ಕಾರ್ಯದರ್ಶಿಗಳಿಗೆ ಸಲ್ಲಿಸತಕ್ಕದ್ದು. ಈ ಮೇಲ್ವಿಚಾರಕ ಸ್ಥಾನವು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ… Read More »

ನಮ್ಮ ಮೆಟ್ರೋನಲ್ಲಿ ಭರ್ಜರಿ ಉದ್ಯೋಗವಕಾಶ ; 30,000 ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 19/10/2021

ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.… Read More »

ಕೆಪಿಟಿಸಿಎಲ್ : 1899 ಹುದ್ದೆಗಳ ಭರ್ತಿಗೆ ಚಾಲನೆ ನೀಡಿದ ಸಚಿವ ವಿ. ಸುನಿಲ್ ಕುಮಾರ್

By | 11/10/2021

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡುತ್ತಿದ್ದರು. ಕೆಪಿಟಿಸಿಎಲ್ ನ… Read More »