ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಪ್ರಕಟಿಸಲಾಗಿದೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿಯಿರುವ 32 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಕ್ಕೆ 2021 ರ ಫೆಬ್ರವರಿ, 20 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆಯನುಸಾರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯಂತೆ 2021 ರ ಆಗಸ್ಟ್, 24 ರಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ದಾಖಲೆ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗಿದೆ.
ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ ಪಟ್ಟಿ ಹಾಗೂ ಹೆಚ್ಚಿನ ಮಾಹಿತಿಯನ್ನು 2021 ರ ಆಗಸ್ಟ್, 27 ರಂದು ಪ್ರಕಟಿಸಲಾಗಿದ್ದು, ವಿವರದ ಮಾಹಿತಿಗೆ http://www.karnatakabhavan.karnataka.gov.in ನ್ನು ವೀಕ್ಷಿಸಬಹುದು. ಬಾಧಿತರಾಗಬಹುದಾದ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಯನ್ನು ಸೆಪ್ಟೆಂಬರ್, 04 ರ ಸಂಜೆ 5-30 ರೊಳಗೆ ಲಿಖಿತವಾಗಿ ಅಥವಾ ಇಮೇಲ್ ಮೂಲಕ ಸಲ್ಲಿಸಬಹುದಾಗಿದೆ ಎಂದು ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತರಾದ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.









Got a Questions?
Find us on Socials or Contact Us and we’ll get back to you as soon as possible.