KSP : ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ – ಸುದ್ದಿಜಾಲ ನ್ಯೂಸ್

By | 21/12/2021

ಬೆಂಗಳೂರು : ಇನ್ನು ಮುಂದೆ ಮಂಗಳಮುಖಿಯರಯ ಕೂಡ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಬಹುದು. ಕೆ ಎಸ್ ಆರ್ ಪಿ ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ ನ ವಿಶೇಷ ಮೀಸಲು ಉಪ ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಹಾಗೂ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಕೆಎಸ್ ಪಿ ಆಹ್ವಾನ ನೀಡಿದೆ.

ಈ ಮೂಲಕ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ‌ಮಹತ್ವದ‌ ಅವಕಾಶವನ್ನು ನೀಡಲಾಗಿದ್ದು, ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಅವರು ಕೆಲಸ ಮಾಡಬಹುದಾಗಿದೆ. ಪ್ರತಿ ವಿಭಾಗದಲ್ಲಿಯೂ ಶೇ.1 ರಷ್ಟು‌ಮೀಸಲಾತಿ ನೀಡಲಾಗಿದೆ.

ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿರುವ ಡಿಜಿ – ಐಜಿಪಿ ಪ್ರವೀಣ್ ಸೂದ್ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ಪೊಲೀ ಇಲಾಖೆಯಲ್ಲಿ ಕೆಲಸಕ್ಕೆ ಅವಕಾಶ ಕಲ್ಪಿಸಲಾಗಿದ್ದು ಸೋಮವಾರ ಅಧಿಸೂಚನೆ ಹೊರಡಿಸಲಾಗಿದೆ. ಮಂಗಳಮುಖಿಯರಿಗೆ ವ್ಯವಸ್ಥೆ ಕಲ್ಪಿಸಿದ ಮೊದಲ ಸರಕಾರಿ ಇಲಾಖೆ ಎಂಬ ಹೆಗ್ಗಳಿಕೆ ನಮ್ಮದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *