ಉತ್ತರಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಉದ್ಯೋಗವಕಾಶ

By | 10/08/2021

ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ ಕಾರವಾರ, ಉತ್ತರ ಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿವೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹೆಸರು : ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು
ಹುದ್ದೆ – 1
ಮೀಸಲಾತಿ : ಸಾಮಾನ್ಯ ಸಮತಳ ಮೀಸಲಾತಿ ಕನ್ನಡ ಮಾಧ್ಯಮ ಅಭ್ಯರ್ಥಿ
ಗರಿಷ್ಠ ವಯೋಮಿತಿ : 36 ವರ್ಷಗಳು
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಆಯುಷ್ ಪದವಿ, ಎಂಬಿಎ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯ.
ಅನುಭವ : ಕನಿಷ್ಠ 3 ವರ್ಷ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರತಕ್ಕದ್ದು. ಆಯುಷ್ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಮಾಸಿಕ ಗೌರವ ಧನ : ರೂ.30,000/-
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 21-08-2021 ರ ಸಂಜೆ 5.30 ರವರೆಗೆ
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಭರ್ತಿ ಮಾಡಿ‌ ಜಿಲ್ಲಾ ಆಯುಷ್ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆ ಕಾರವಾರ- 581301 ಇವರಿಹೆ ನಿಗದಿತ ಅವಧಿಯೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 08382-220883 ಗೆ ಸಂಪರ್ಕಿಸುವುದು.

Leave a Reply

Your email address will not be published. Required fields are marked *