ಚಿತ್ರದುರ್ಗ ಗ್ರಂಥಾಲಯದಲ್ಲಿ ಹುದ್ದೆ

By | 21/10/2021

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರಿಬರಹಟ್ಟಿ ಗ್ರಾಮ‌ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ರೂ.12,000/- ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಕೆಳಕಾಣಿಸಿದ ಷರತ್ತುಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ 10-11-2021 ರೊಳಗೆ ಪಿಡಿಒ / ಪಂಚಾಯ್ತಿ ಕಾರ್ಯದರ್ಶಿಗಳಿಗೆ ಸಲ್ಲಿಸತಕ್ಕದ್ದು. ಈ ಮೇಲ್ವಿಚಾರಕ ಸ್ಥಾನವು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ… Read More »

ನಮ್ಮ ಮೆಟ್ರೋನಲ್ಲಿ ಭರ್ಜರಿ ಉದ್ಯೋಗವಕಾಶ ; 30,000 ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 19/10/2021

ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.… Read More »

ಕೇಂದ್ರ ಕಾರಾಗೃಹದ 5 ಹುದ್ದೆಗೆ ಅರ್ಜಿ ಆಹ್ವಾನ

By | 17/10/2021

ಬೆಂಗಳೂರು : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಖಾಲಿ ಇರುವ ಐದು ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆಗಳಿಗೆ 11 ತಿಂಗಳ ಅವಧಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿಯಲ್ಲಿ ಅಧಿಕ ಅಂಕ ಗಳಿಸಿದವರು, ಮಾನಸಿಕ ಮತ್ತು ಮನೋವೈದ್ಯಕೀಯ ವಿಷಯದ ಮೇಲೆ ಸ್ನಾತಕೋತ್ತರ ಕಲಿತು ಭಾರತೀಯ ಪುನರ್ವಸತಿ ಮಂಡಳಿ ಮಾನ್ಯತೆ ಪಡೆದವರು ಅರ್ಹರು. ಮಾಸಿಕ ರೂ.25 ಸಾವಿರ ಇರಲಿದೆ. 45 ವರ್ಷ ವಯೋಮಿತಿ ಮೀರದವರು ನ. 15 ರೊಳಗೆ ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ, ಪರಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ… Read More »

ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಲಿ., ಬೆಂಗಳೂರು : ವಿವಿಧ ಹುದ್ದೆ

By | 17/10/2021

ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿ.,ಬೆಂಗಳೂರು ಇಲ್ಲಿ ವಿವಿಧ ಹುದ್ದೆಗಳಿಗಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

ವಾಟ್ಸ್ಆ್ಯಪ್ ಸ್ಥಾಪಕ ಜಾನ್ ಕೋಮ್ ಯಶೋಗಾಥೆ, ಈ ಕತೆ ನಿಮಗೂ ಸ್ಫೂರ್ತಿ ನೀಡಬಲ್ಲದು! ಓದಿ

By | 15/10/2021

ಜಗತ್ತಿನ ಸುಮಾರು 109 ದೇಶಗಳಲ್ಲಿ ಜನಪ್ರಿಯತೆ ಪಡೆದಿರುವ ವಾಟ್ಸ್‍ಆ್ಯಪ್ ಬಗ್ಗೆ ಗೊತ್ತಿಲ್ಲದೆ ಇರುವವರು ಯಾರೂ ಇರಲಿಕ್ಕಿಲ್ಲ. ಇದನ್ನು ಬರೋಬ್ಬರಿ 1600 ಕೋಟಿ ಡಾಲರ್ ಕೊಟ್ಟು ಫೇಸ್‍ಬುಕ್ ಖರೀದಿಸಿತ್ತು. ಇಷ್ಟೊಂದು ದುಬಾರಿ ಮೊತ್ತಕ್ಕೆ ಬಿಕರಿಯಾದ ವಾಟ್ಸ್‍ಆ್ಯಪ್ ಅನ್ನು ಆರಂಭಿಸಿದ್ದು ಜಾನ್ ಕೋಮ್. ಈತನ ಬಾಲ್ಯ, ಬದುಕು, ಸಾಧನೆ ಎಲ್ಲರಿಗೂ ಸೂರ್ತಿ ನೀಡುವಂತದ್ದು. ಈತನ ಕತೆ ಆರಂಭವಾಗುವುದು ದೂರದ ಉಕ್ರೈನ್‍ನಿಂದ. ಅದು 1992ನೇ ಇಸವಿ. ಜಾನ್ ಕೋಮ್ ಎಂಬ ಬಾಲಕನಿಗೆ 16 ವರ್ಷ ವಯಸ್ಸು. ಅರ್ಥವ್ಯವಸ್ಥೆ ಕೆಟ್ಟದಾಗಿತ್ತು. ಯಾರ ಕೈಯಲ್ಲಿಯೂ ದುಡ್ಡಿರಲಿಲ್ಲ. ದಟ್ಟ ದರಿದ್ರ… Read More »

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಿರಾ? ಈ ರೀತಿ ಸಿದ್ಧತೆ ನಡೆಸಿದರೆ ನಿಮಗೆ ಯಶಸ್ಸು ಗ್ಯಾರಂಟಿ!

By | 15/10/2021

ಪೂರ್ವ ಸಿದ್ಧತೆ ಇಲ್ಲದೆ ಪರೀಕ್ಷೆ ಬರೆದರೆ ಯಶಸ್ಸು ಕೈಗೆಟುಕದಷ್ಟು ದೂರದಲ್ಲಿರುತ್ತದೆ. ಪ್ರತಿವರ್ಷ ರೈಲ್ವೆ, ಬ್ಯಾಂಕ್, ಕೆಪಿಎಸ್‍ಸಿ, ಯುಪಿಎಸ್‍ಸಿ, ಪಿಡಿಒ, ಪೊಲೀಸ್ ನೇಮಕ ಪರೀಕ್ಷೆ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅಭ್ಯರ್ಥಿಗಳು ಎದುರಿಸಬೇಕಿರುತ್ತದೆ. ಬಹುತೇಕರು ಸರಕಾರಿ ಉದ್ಯೋಗ ಸಿಕ್ಕರೆ ಸಿಗಲಿ ಎಂಬ ಆಸೆಯಿಂದ ಅರ್ಜಿ ಸಲ್ಲಿಸುತ್ತಾರೆ. ಯಾವುದೇ ಸಮರ್ಪಕ ಸಿದ್ಧತೆ ಇಲ್ಲದೆ ಪರೀಕ್ಷೆ ಬರೆದು ಫಲಿತಾಂಶದಲ್ಲಿ ಹೆಸರು ಇಲ್ಲದೆ ಇರುವುದನ್ನು `ಸರಕಾರಿ ಜಾಬ್ಸ್ ಸಿಗುವುದು ಸುಲಭವಲ್ಲ ಎಂದುಕೊಳ್ಳುತ್ತಾರೆ. ಉದ್ಯೋಗ ಮಾರುಕಟ್ಟೆಯಲ್ಲೀಗ ಸ್ಪರ್ಧೆ  ಹೆಚ್ಚಿದೆ. ಯಾವುದೇ ಜಾಬ್ ನೋಟಿಫಿಕೇಷನ್ ಪ್ರಕಟವಾಗಲಿ. ಇರುವುದು ಕೆಲವೇ ಹುದ್ದೆಗಳಾಗಿದ್ದರೂ… Read More »