Tag Archives: krishnarjuna

ಕತೆ; ‘ಕೃಷ್ಣಾರ್ಪಣ ಮಸ್ತು’

ಪವಿತ್ರಾ ಶೆಟ್ಟಿ ಅಮ್ಮ ಫೋನ್ ಮಾಡಿದ್ದಳು. ಚಿಕ್ಕಮ್ಮತ್ತೆ ಏನೇನೋ ಮಾತಾಡುತ್ತಿದ್ದಾರೆ. ಯಾಕೋ ಇತ್ತೀಚೆಗೆ ಅವರು ಈ ಲೋಕದಲ್ಲಿ ಇದ್ದವರ ಹಾಗೇ ಇಲ್ಲಪ್ಪ. ನೀ ಒಮ್ಮೆ ಬಂದು ಹೋಗು. ಎದೆಯೊಳಗೆ ಪುಕು ಪುಕು ಶುರುವಾಗಿ ಅದು ಹೊಟ್ಟೆಯೊಳಗೂ ಕಾಣಿಸಿಕೊಂಡು ಯಾಕೋ ಪಾಯಿಖಾನೆಗೆ ಓಡಿಯೇ ಬಿಡೋಣ ಅನ್ನಿಸಿ ಅಮ್ಮಾ.. ನಿನಗೆ ಆಮೇಲೆ ಫೋನ್ ಮಾಡುತ್ತೇನೆ ಎಂದು ಪೋನಿಟ್ಟೆ. ಹೆದರಿಕೆಯಾದಾಗಲೆಲ್ಲ ಹೊಟ್ಟೆಯೊಳಗೆ ಏನೇನೋ ತಳಮಳವಾಗಿ ನನಗೆ ಪಾಯಿಖಾನೆಗೆ ಹೋಗಬೇಕು ಅನ್ನಿಸುವುದು ಮೊದಲಿನಿಂದಲೂ ಇದ್ದ ಖಯಾಲಿ. ಅದು ಚಿಕ್ಕಮ್ಮತ್ತೆಯಿಂದಲೇ ಬಂದ ಉಡುಗೊರೆ. ಇನ್ನು ತಡ ಮಾಡುವುದು ಬೇಡ… Read More »