ಶಿಕ್ಷಕರ ಭೌತಿಕ ಹಾಜರಿಗೆ ಸೂಚನೆ : ಎಸ್. ಸುರೇಶ್ ಕುಮಾರ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ, ಶಿಕ್ಷಕರ ಚಲನವಲನಕ್ಕೆ ತೊಂದರೆ ಆಗಿರುವುದರಿಂದ, ಲಾಕ್ಡೌನ್ ತೆರವಾದ ಕೂಡಲೇ ಶಿಕ್ಷಕರು ಭೌತಿಕವಾಗಿ ಶಾಲೆಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ. ಎಸ್… Read More »